ಡಾ|| ವಿಷ್ಣುವರ್ಧನ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಡಾ|| ವಿಷ್ಣುವರ್ಧನ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ನವೆಂಬರ್ 11, 2013

ಕರ್ಣ : ಆ ಕರ್ಣನಂತೆ ನೀ ದಾನಿಯಾದೆ : Aa Karnanante Nee Daniyade

ಹಾಡು: ಆ ಕರ್ಣನಂತೆ ನೀ ದಾನಿಯಾದೆ
ಚಲನಚಿತ್ರ: ಕರ್ಣ
ಸಂಗೀತ ನಿರ್ದೇಶಕರು: ಎಂ. ರಂಗರಾವ್
ಕವಿ: ಚಿ.ಉದಯಶಂಕರ್
ವರ್ಷ: 1986
ಹಾಡುಗಾರರು: ಕೆ. ಜೆ. ಯೇಸುದಾಸ್
ಪಾತ್ರದಾರಿಗಳು: ವಿಷ್ಣುವರ್ಧನ್, ಸುಮಲತಾ, ಕೆ.ಎಸ್. ಆಶ್ವಥ್, ಅವಿನಾಶ್
ಚಿತ್ರದ ನಿರ್ದೇಶಕರು: ಭಾರ್ಗವ
ನಿರ್ಮಾಪಕರು: ಅಮೃತ ಕಲಾ 

ಹಾಡು ಕೇಳಿ...

ಆ ಕರ್ಣನಂತೆ ನೀ ದಾನಿಯಾದೆ
ಇನ್ನೊಂದು ಜೀವಕೆ ಆಧಾರವಾದೆ    ||ಪ|| 

ಕಸದಂತೆ ಕಂಡರು ಮನೆಯಲ್ಲಿ ಎಲ್ಲರು
ದಿನವೆಲ್ಲಾ ಬಾಳಲಿ ಕಣ್ಣೀರು ತಂದರು
ಕಸದಂತೆ ಕಂಡರು ಮನೆಯಲ್ಲಿ ಎಲ್ಲರು
ದಿನವೆಲ್ಲಾ ಬಾಳಲಿ ಕಣ್ಣೀರು ತಂದರು
ನಿನ್ನಂತ ರಂಗವಾ ಅವರೇನು ಬಲ್ಲರು
ನಿನ್ನನ್ನು ಹೆತ್ತವರು ಮಹಾ ಪುಣ್ಯವಂತರು  ||೧||

ಬಾಳೆಂಬ ಆಟದಿ ಚೆಂಡಂತೆ ಎಲ್ಲರು
ತನ್ನಾಸೆಯಂತೆಯೇ ಆಡೋದು ದೇವರು
ಇಂದಲ್ಲಾ ನಾಳೆ ಸಾಯೋದೆ ಎಲ್ಲರು
ಏನಾದರೇನೀಗಾ  ನಿನ್ನನ್ನು ಮರೆಯರು    ||೨||

ಪ್ರೀತಿಯಲಿ ಸುಖವುಂಟು ಸ್ನೇಹದಲಿ ಹಿತವುಂಟು
ತ್ಯಾಗಕ್ಕೆ ಫಲವುಂಟು ನಿನಗೊಂದು ಬೆಲೆಯುಂಟು
ಬಂಗಾರದಂತ ಗುಣವು ನಿನ್ನಲ್ಲಿ ಇರುವಾಗ 
ಬಾಳೆಂಬ ಹೋರಾಟದಲಿ ಸೋಲೆಂಬುದೆಲ್ಲುಂಟು   ||೩||
Labels: Aa Karnanante Nee Daniyade, Karna, M. Ranga Rao, Chi. Udayashankar, 1986, Vishnuvardhan, Sumalata, K.S. Aswath, Avinash

ಜಿಮ್ಮಿಗಲ್ಲು : ತುತ್ತು ಅನ್ನ ತಿನ್ನೋಕೆ : Tuttu Anna Tinnoke

ಹಾಡು: ತುತ್ತು ಅನ್ನ ತಿನ್ನೋಕೆ
ಚಲನಚಿತ್ರ: ಜಿಮ್ಮಿಗಲ್ಲು
ಸಂಗೀತ ನಿರ್ದೇಶಕರು: ವಿಜಯಭಾಸ್ಕರ್
ಕವಿ: ಚಿ.ಉದಯಶಂಕರ್
ವರ್ಷ: 1982
ಹಾಡುಗಾರರು: ವಿಷ್ಣುವರ್ಧನ್

ಪಾತ್ರದಾರಿಗಳು: ವಿಷ್ಣುವರ್ಧನ್, ಶ್ರೀಪ್ರಿಯಾ, ಸುಂದರಕೃಷ್ಣ ಅರಸ್
ಚಿತ್ರದ ನಿರ್ದೇಶಕರು: ಕೆ.ಎಸ್.ಎಲ್. ಸ್ವಾಮಿ (ರವಿ)
ನಿರ್ಮಾಪಕರು: ನವನಿಧಿ ಚಿತ್ರ

ಹಾಡು ಕೇಳಿ...

ತುತ್ತು ಅನ್ನ ತಿನ್ನೋಕೆ ಬೊಗಸೆ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ    ||ಪ|| 
 

ಕಡ್ನಾಗ್ ಒಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರಾಗ್ ಒಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಒಂದು ಹಳ್ಳಿ ನನ್ನಾ,ಹೋಗೋ ಅಂದರೇನು

ಸ್ವರ್ಗದಂತ ಊರು ನನ್ನ ಹತ್ತಿರ ಕರೆದಾಯ್ತು    ||೧|| 

ದುಡಿಯೋದಕ್ಕೆ ಮೈಯಾ ತುಂಬಾ ಶಕ್ತಿ ತುಂಬೈತೆ
ಅಡ್ಡದಾರಿ ಹಿಡಿಯೋದ್ ತಪ್ಪು ಅಂತಾ ಗೊತೈತೆ
ಕಷ್ಟ ಒಂದೇ ಬರದು,ಸುಖವು ಬರದೆ ಇರದು

ರಾತ್ರಿ ಮುಗಿದ ಮೇಲೆ ಹಗಲು ಬಂದೇ ಬರ್ತೈತೆ ಆಂ  ||೨|| 

ಹರಿಯೋ ನದಿಯು ಒಂದೇ ಕಡೆ ನಿಲ್ಲೋಕಾಗಲ್ಲ
ಹುಟ್ಟಿದ ಮನುಷಾ ಒಂದೇ ಊರಲಿ ಬಾಳೋಕಾಗಲ್ಲ
ದೇವ್ರು ತಾನೆ ನಂಗೆ,ಅಪ್ಪ ಅಮ್ಮ ಎಲ್ಲಾ

ಸಾಯೋಗಂಟ ನಂಬಿದವರ ಕೈ ಬಿಡೋಕಿಲ್ಲಾ   ||೩||  

Labels:  Tuttu Anna Tinnoke, Jimmy Gallu, Vijaya Bhaskar, Chi. Udayashankar, 1982, Vishnuvardhan, Sripriya, Sundarakrishna Urs

ಸೋಮವಾರ, ಸೆಪ್ಟೆಂಬರ್ 30, 2013

ಆಪ್ತಮಿತ್ರ : ಕಣಕಣದೆ ಶಾರದೆ : Kanakanade Sharade

ಹಾಡು: ಕಣಕಣದೆ ಶಾರದೆ
ಚಲನಚಿತ್ರ: ಆಪ್ತಮಿತ್ರ
ಸಂಗೀತ ನಿರ್ದೇಶಕರು: ಗುರುಕಿರಣ್
ಕವಿ: ಕವಿರಾಜ್
ವರ್ಷ: 2004
ಹಾಡುಗಾರರು: ಮಧು ಬಾಲಕೃಷ್ಣನ್
ಪಾತ್ರದಾರಿಗಳು: ಡಾ|| ವಿಷ್ಣುವರ್ಧನ್, ರಮೇಶ್, ಅವಿನಾಶ್, ಸೌಂದರ್ಯ, ಪ್ರೇಮ
ಚಿತ್ರದ ನಿರ್ದೇಶಕರು: ಪಿ. ವಾಸು
ನಿರ್ಮಾಪಕರು: ದ್ವಾರಕೀಶ್ ಚಿತ್ರ

ಹಾಡು ಕೇಳಿ...

ಕಣಕಣದೆ ಶಾರದೆ ಕಲೆತಿಹಳು ಕಾಣದೆ
ವನವನದಲ್ಲು ಕುಹುಕುಹು ಗಾನ
ಝರಿಝರಿಯಲ್ಲೂ ಝುಳುಝುಳು ಧ್ಯಾನ
ವಿಧವಿಧದಾ ನಾದ ಅವಳು ನುಡಿಸುತಿಹಳು ||ಪ||

ಜನನಕು ಹಾಡು ಮರಣಕು ಹಾಡು ಲಾಲಿ ಚರಮಗಳು
ಪ್ರತಿ ಎದೆಯಾಳದಲು ಲಯ ತಾಳ ಗೀತೆ ಬದುಕಿನಲು
ಕೊರಳಿನಲಿ ಕೊಳಲಿನಲಿ ಚೆಲುವಿನಲಿ ಒಲವಿನಲಿ
ಒಲಿದು ನುಲಿದು ನಲಿದು ಹರಿದು ಬರುವುದು ಶ್ರುತಿ ಲಯವು ||೧||

ಕುಲನೆಲದಾಚೆ ಅರಿಯುವ ಭಾಷೆ ಒಂದೇ ಜಗದೊಳಗೆ
ಅವರಿವರಿಲ್ಲ ಸರಿಸಮರಿಲ್ಲ ಸಪ್ತ ಸ್ವರಗಳಿಗೆ
ನಿಪಮಪನಿ ಸನಿಪನಿಸ ಗಸನಿಸಗಾ ಮಪಮಪಗಾ
ನಿಪಮಪನಿ ಸನಿಪನಿಸ ಗಸನಿಸಗಾ ಆ ಆ ಆ ಆ  ||೨||


Kanakanade Sharade, Aptamitra, Gurukiran, Kaviraj, 2004, Madhu Balakrishnan, Dr. Vishnuvardhan, Soundarya, Ramesh, Prema, Avinash